Connect with us

ಉದ್ಯೋಗ

Village Administration Officer-ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಸಲು ಮೇ 4 ಕಡೇ ದಿನ

Ad Widget

Ad Widget

Ad Widget

Ad Widget

ಬೆಂಗಳೂರು: ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏ.5ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ.

Ad Widget

Ad Widget

Ad Widget

ಹುದ್ದೆಗಳ ನೇಮಕಾತಿಗೆ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಿದಾಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸಲು ಏ.3ರವರೆಗೆ ಅವಕಾಶ ನೀಡಿತ್ತು. ಆದರೆ, ಆನ್ಲೈನ್ ಅರ್ಜಿ ಸಲ್ಲಿಕೆಯಲ್ಲಿನ ತಾಂತ್ರಿಕ ದೋಷಗಳ ಕಾರಣ ಈಗ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 7ರವರೆಗೆ ಅವಕಾಶ ನೀಡಲಾಗಿದೆ.

Ad Widget

ಕೆ-ಸೆಟ್ ಕೀ ಉತ್ತರ ಪ್ರಕಟ:
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ಕೀ ಉತ್ತರಗಳನ್ನು ಕೆಇಎ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಜ. 13ರಂದು 42 ವಿವಿಧ ವಿಷಯಗಳಿಗೆ ಪರೀಕ್ಷೆ ನಡೆಸಲಾಗಿತ್ತು

Ad Widget

Ad Widget
Click to comment

Leave a Reply

ಉದ್ಯೋಗ

Online applications-ಮೇ 2ರಿಂದ ಆನ್‌ಲೈನ್‌ ಮೂಲಕ ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ

Ad Widget

Ad Widget

Ad Widget

Ad Widget

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

Ad Widget

Ad Widget

Ad Widget

ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1.

Ad Widget

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

Ad Widget

Ad Widget

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Ad Widget

Ad Widget

Ad Widget

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ :
ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.
ಗಮನಿಸಿ ಮೇ 2ರ ಬಳಿಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

Continue Reading

ಉದ್ಯೋಗ

Job In Mobile Factory | ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯಲ್ಲಿ ಉದ್ಯೋಗವಕಾಶ : ಪುತ್ತೂರಿನಲ್ಲಿ ನೇರ ಸಂದರ್ಶನ

Ad Widget

Ad Widget

Ad Widget

Ad Widget

ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉದ್ಯೋಗ ಅವಕಾಶಗಳಿಗೆ ಪುತ್ತೂರಿನಲ್ಲಿ ನೇರ ಸಂದರ್ಶನ.

Ad Widget

Ad Widget

Ad Widget


ಪ್ರಾರಂಭಿಕ 19ಸಾವಿರ ವೇತನದೊಂದಿಗೆ ಉಚಿತ ವಸತಿ ಊಟ, PF, ESI ಇತ್ಯಾದಿ ಸೌಲಭ್ಯಗಳು
ಪುತ್ತೂರಿನ ಪ್ರತಿಷ್ಠಿತ ತರಬೇತಿ ಮತ್ತು ಉದ್ಯೋಗದಾತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉತ್ಪಾದನಾ ಘಟಕಕ್ಕೆ ಅವಶ್ಯವಿರುವ 300 ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 11- 4 – 2024 ರಂದು ಬೆಳಿಗ್ಗೆ 10 ರಿಂದ ವಿದ್ಯಾಮಾತಾ ಅಕಾಡೆಮಿ ಎ.ಪಿ.ಎಂ.ಸಿ ರಸ್ತೆಯಲ್ಲಿರುವ ಕಛೇರಿಯಲ್ಲಿ ನಡೆಸಲಾಗುತ್ತದೆ.

Ad Widget

ನೇರ ಸಂದರ್ಶನವನ್ನು ಕಂಪನಿಗೆ ಮಾನವ ಸಂಪನ್ಮೂಲಗಳನ್ನು ಒದಗಿಸುವ ಸಂಪನ್ಮೂಲ ಅಧಿಕಾರಿಗಳೇ ನೇರವಾಗಿ ನಡೆಸಲಿದ್ದು SSLC/PUC/ ITI /Diploma/ BE / Any degree ಓದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

Ad Widget

Ad Widget


ವಯಸ್ಸಿನ ಮಿತಿ :- 18 ರಿಂದ 26 ಒಳಗಿನ ಅಭ್ಯರ್ಥಿಗಳಿಗೆ
ಪ್ರಾರಂಭಿಕ ವೇತನ ಶ್ರೇಣಿ :- 19,048 ರೂ
ಹುದ್ದೆಯ ವಿವರ :- ಟೀಮ್ ಲೀಡರ್, ಮೊಬೈಲ್ ಅಸ್ಸೆಂಬಲ್ ಸ್ಟಾಫ್

Ad Widget

Ad Widget

Ad Widget

ಸಂದರ್ಶನಕ್ಕೆ ತರಬೇಕಾದ ದಾಖಲೆಗಳು :- ಬಯೋಡೇಟಾ, ಆಧಾರ್ , 2 ಪಾಸ್ಪೋರ್ಟ್ ಸೈಜ್ ಫೋಟೋ
ಅಭ್ಯರ್ಥಿಗಳಿಗೆ ಸಿಗುವ ಸೌಲಭ್ಯಗಳು:- ಉಚಿತ ಹಾಸ್ಟೆಲ್, ಉಚಿತ ಊಟ ,ಉಚಿತ ಸಾರಿಗೆ ,ESI, PF, ವಾರ್ಷಿಕ ಬೋನಸ್ ,ಅಟೆಂಡೆನ್ಸ್ ಬೋನಸ್ ,ವೈದ್ಯಕೀಯ ಸೌಲಭ್ಯಗಳು, ವಾರ್ಷಿಕ ರಜೆ ಸಹಿತ ಇನ್ನಿತರ ಸೌಲಭ್ಯಗಳು.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಳಾಸ ಅಥವಾ ಮೊಬೈಲ್ ನಂಬರ್ ಸಂಪರ್ಕಿಸಬಹುದು.

ವಿದ್ಯಾಮಾತಾ ಅಕಾಡೆಮಿ
ಕೇಂದ್ರ ಕಛೇರಿ : ಹಿಂದೂಸ್ತಾನ್ ಕಾಂಪ್ಲೆಕ್ಸ್ 1ನೇ ಮಹಡಿ ,ಎ.ಪಿ.ಎಂ.ಸಿ ರಸ್ತೆ ಪುತ್ತೂರು, ದ. ಕ
9620468869/8590773486/9448527606/9148935808

Continue Reading

ಉದ್ಯೋಗ

Karnataka Transport Department Recruitment- ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ : ರೂ 62 ಸಾವಿರವರೆಗೆ ವೇತನ ವಿರುವ 76 ಸಿ-ಗ್ರೂಪ್ ಹುದ್ದೆಗೆ ಅರ್ಜಿ ಅಹ್ವಾನ

Ad Widget

Ad Widget

Ad Widget

Ad Widget

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೂಲ ವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ‘ಗ್ರೂಪ್ ಸಿ’ ವಿಭಾಗದ ವಾಹನ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ.

Ad Widget

Ad Widget

Ad Widget

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೂಲ ವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ‘ಗ್ರೂಪ್ ಸಿ’ ವಿಭಾಗದ ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ನೇಮಾಕಾತಿ ಪ್ರಕ್ರಿಯೆ ಆರಂಭಗೊಂಡಿದೆ.

Ad Widget

ವೇತನ ಶ್ರೇಣಿ : ಇದು ಸಿ–ಗ್ರೂಪ್ ವೇತನ ಶ್ರೇಣಿ ಹೊಂದಿದ್ದು ರೂ 62 ಸಾವಿರವರೆಗೆ ವೇತನ ಲಭಿಸಲಿದೆ.
ಎಸ್ಎಸ್ಎಲ್ಸಿ/10 ನೇ ತರಗತಿ ಜೊತೆಗೆ ಮೂರು ವರ್ಷದ ಆಟೊಮೊಬೈಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ಮೆಕಾನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹ. ಇದರ ಜೊತೆಗೆ ಡಿಪ್ಲೊಮಾ ಇನ್ ಮೆಕಾನಿಕಲ್ ಎಂಜಿನಿಯರಿಂಗ್, ಡಿಪ್ಲೊಮಾ ಇನ್ ಆಟೊಮೊಬೈಲ್ ಎಂಜಿನಿಯರಿಂಗ್ ನಲ್ಲಿ ಬಿಇ ಅಥವಾ ಬಿ.ಟೆಕ್ ಮಾಡಿದವರೂ ಅರ್ಜಿ ಸಲ್ಲಿಸಬಹುದು. ಜೊತೆಗೆ ಚಾಲನಾ ಪರವಾನಗಿ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.

Ad Widget

Ad Widget

ಕನಿಷ್ಠ 18 ವರ್ಷ ವಯಸ್ಸು ಪೂರೈಸಿರುವವರು ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹ. 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಟಿ ಮತ್ತು ಪ್ರವರ್ಗ 1, ವಿಶೇಷ ಚೇತನರಿಗೆ 5 ವರ್ಷ ಸಡಿಲಿಕೆ ಇದೆ.
ಆನ್ಲೈನ್ ಅರ್ಜಿ ಸಲ್ಲಿಕೆ ಏ. 22 ರಿಂದ ಆರಂಭವಾಗಲಿದ್ದು ಮೇ 21 ಕಡೆಯ ದಿನವಾಗಿರಲಿದೆ. ಅರ್ಹ ಪುರುಷ, ಮಹಿಳೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Ad Widget

Ad Widget

Ad Widget

ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600, 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ. 300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50 ಹಾಗೂ ಎಸ್ಸಿ, ಎಸ್ಟಿ ಮತ್ತು ಪ್ರವರ್ಗ 1, ವಿಶೇಷ ಚೇತನರಿಗೆ ಶುಲ್ಕ ವಿನಾಯಿತಿ ಇದೆ.
ಪುರುಷರು ಕನಿಷ್ಠ 168 ಸೆಂ.ಮೀ ಹಾಗೂ ಮಹಿಳೆಯರು 157 ಸೆಂ.ಮೀ ಎತ್ತರದ ಜೊತೆ ಇತರೆ ಅಗತ್ಯ ದೈಹಿಕ ಮಾನದಂಡಗಳನ್ನು ಹೊಂದಿರಬೇಕು.

ನೇಮಕಾತಿ ಪ್ರಕ್ರಿಯೆ
ಈ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದ್ದು ಸಂದರ್ಶನ ಇರುವುದಿಲ್ಲ. ಕನ್ನಡ ಕಡ್ಡಾಯ ಭಾಷೆ ಪರೀಕ್ಷೆ ಜೊತೆ ಎರಡು ಪತ್ರಿಕೆಗಳ ಬಹು ಆಯ್ಕೆ ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾಗುತ್ತದೆ. ನಂತರ ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಇರಲಿದೆ. ಆ ನಂತರ ಮೆರಿಟ್ ಆಧಾರದ ಮೇಲೆ ಮೀಸಲು ಅನ್ವಯ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಪರೀಕ್ಷೆ
ಮೊದಲು ಕನ್ನಡ ಕಡ್ಡಾಯ ಭಾಷೆ ಪರೀಕ್ಷೆ ಎದುರಿಸಬೇಕಾಗುತ್ತದೆ. 150 ಅಂಕಗಳ ಈ ಪರೀಕ್ಷೆಯಲ್ಲಿ ಕನಿಷ್ಠ ಶೇ 35 ಅಂಕಗಳನ್ನು ಪಡೆಯುವುದು ಕಡ್ಡಾಯ. ಎರಡನೇಯದಾಗಿ ಬಹು ಆಯ್ಕೆಯ ಎರಡು ಪತ್ರಿಕೆಗಳ ಪರೀಕ್ಷೆ. ಇದರಲ್ಲಿ ಮೊದಲ ಪತ್ರಿಕೆ ಒಂದೂವರೆ ಗಂಟೆಯದ್ದಾಗಿದ್ದು 100 ಪ್ರಶ್ನೆಗಳಿಗೆ 100 ಅಂಕಗಳನ್ನು ಹೊಂದಿರುತ್ತದೆ. ಎರಡನೇ ಪತ್ರಿಕೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಹಾಗೂ ಸಾಮಾನ್ಯ ಕಂಪ್ಯೂಟರ್ ಜ್ಞಾನ ಎಂಬ ಮೂರು ಭಾಗಗಳನ್ನು ಹೊಂದಿರುತ್ತದೆ. ಒಟ್ಟು 100 ಪ್ರಶ್ನೆಗಳಿಗೆ 100 ಅಂಕಗಳು. ಅವಧಿ ಎರಡು ಗಂಟೆ. ಪ್ರತಿ ನಾಲ್ಕು ತಪ್ಪು ಉತ್ತರಗಳಿಗೆ 1 ಅಂಕ ಕಳೆಯಲಾಗುತ್ತದೆ.

ಪರೀಕ್ಷಾ ಪಠ್ಯಕ್ರಮ
ಪ್ರಚಲಿತ ಘಟನೆಗಳು, ದೈನಂದಿನ ಗ್ರಹಿಕೆಯ ವಿಷಯಗಳು, ಭಾರತದ ಸಂವಿಧಾನ, ವಿಶೇಷವಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಭಾರತದ ಇತಿಹಾಸ, ಕರ್ನಾಟಕಕ್ಕೆ ಸಂಬಂಧಿಸಿದಂತೆ ಭಾರತದ ಭೂಗೋಳ ವಿಷಯಗಳು, ರಾಜ್ಯ ಮತ್ತು ಪ್ರಾದೇಶಿಕ ಆಡಳಿತದ ಕುರಿತ ವಿಷಯಗಳು, ಗ್ರಾಮೀಣಾಭಿವೃದ್ಧಿ ಪಂಚಾಯತ್ರಾಜ್ ಸಂಸ್ಥೆಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಉಪಕ್ರಮಗಳನ್ನು ಒಳಗೊಂಡಂತೆ ಕರ್ನಾಟಕದ ಆರ್ಥಿಕತೆಯ ಅಭಿವೃದ್ಧಿ ಕುರಿತ ವಿಷಯಗಳು, ಕರ್ನಾಟಕದ ಪರಿಸರ ಸಂಬಂಧಿ ಸಮಸ್ಯೆಗಳು ಮತ್ತು ಅಭಿವೃದ್ಧಿ ಕುರಿತ ವಿಷಯಗಳು.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading