ಅಪರಾಧ
Everest fish curry-ಎವರೆಸ್ಟ್ ಫಿಶ್ಕರಿ ಮಸಾಲಾದಲ್ಲಿ ಎಥಿಲಿನ್ ಆಕ್ಸೆಡ್ ಪತ್ತೆ
ಸಿಂಗಾಪುರ: ಭಾರತದ ಜನಪ್ರಿಯ ಉತ್ಪನ್ನ `ಎವರೆಸ್ಟ್ ಫಿಶ್ಕರಿ ಮಸಾಲಾ’ದಲ್ಲಿ ಅನುಮತಿಸಿರುವುದಕ್ಕಿಂತ ಅಧಿಕ ಮಟ್ಟದ ಎಥಿಲಿನ್ ಆಕ್ಸೆಡ್ ರಾಸಾಯನಿಕವಿದೆ ಎಂಬ ಕಾರಣಕ್ಕೆ ಈ ಮಸಾಲಾ ಉತ್ಪನ್ನವನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಸಿಂಗಾಪುರ ಆದೇಶಿಸಿದೆ.
ಎಥಿಲೀನ್ ಆಕ್ಸೆಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ ಮತ್ತು ಬ್ಯಾಕ್ಟಿರಿಯಾಗಳ ಮಾಲಿನ್ಯವನ್ನು ತಡೆಗಟ್ಟಲು ಕೃಷಿ ಉತ್ಪನ್ನಗಳ ಧೂಮೀಕರಣ(ಕೀಟನಿಯಂತ್ರಣದ ಒಂದು ವಿಧಾನ)ಕ್ಕೆ ಮಾತ್ರ ಬಳಸಲಾಗುತ್ತದೆ ಎಂದು ಸಿಂಗಾಪುರ ಫುಡ್ ಏಜೆನ್ಸಿಯ ಹೇಳಿಕೆ ತಿಳಿಸಿದ್ದು ಎವರೆಸ್ಟ್ ಫಿಶ್ಕರಿ ಮಸಾಲಾವನ್ನು ಆಮದು ಮಾಡಿಕೊಳ್ಳುವ ಎಸ್ಪಿ ಮುತ್ತಯ್ಯ ಆ್ಯಂಡ್ ಸನ್ಸ್ ಪ್ರೈ.ಲಿ. ಸಂಸ್ಥೆಗೆ ಸಿಂಗಾಪುರ ಮಾರುಕಟ್ಟೆಯಿಂದ ಉತ್ಪನ್ನವನ್ನು ತಕ್ಷಣ ವಾಪಾಸು ಪಡೆಯುವಂತೆ ಸೂಚಿಸಿದೆ.
ಅಪರಾಧ
Suspension order-ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ದೊರೆತು ಕರ್ತವ್ಯಕ್ಕೆ ತೊಡಗಿದ ಬೆನ್ನಲ್ಲೇ ಅಮಾನತು ಆದೇಶ
ಪುತ್ತೂರು ಎಪಿಎಂಸಿಯ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು, ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಸೇವೆಯಿಂದ ಅಮಾನತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ಗುರುವಾರ ಬೆಳಿಗ್ಗೆ ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.
‘ರಾಮಚಂದ್ರ ಅವರು ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ’ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜ. 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.
ಈ ದೂರಿನ ತನಿಖೆಗಾಗಿ ಅಧಿಕಾರಿಗಳ ತಂಡ ರಚಿಸಲಾಗಿತ್ತು. ಈ ಮಧ್ಯೆ ರಾಮಚಂದ್ರ ಅವರನ್ನು ಜ.16ರಿಂದ 2 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶ ಮಾಡಿದ್ದರು. ಈ ನಡುವೆ ರಾಮಚಂದ್ರ ಅವರ ವಿರುದ್ಧದ ದೂರಿನ ಕುರಿತು ಇಲಾಖಾ ವಿಚಾರಣೆ ನಡೆಸಲು ಆಡಳಿತಾತ್ಮಕ ದೃಷ್ಟಿಯಿಂದ ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇದ್ದ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಮಾರಾಟ ಇಲಾಖೆ ಆದೇಶ ಮಾಡಿತ್ತು. ರಾಮಚಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಕೇಂದ್ರ ಕಚೇರಿಗೆ ವರದಿ ಸಲ್ಲಿಸಲು ಪುತ್ತೂರು ಎಪಿಎಂಸಿ ಸಮಿತಿ ಕಾರ್ಯದರ್ಶಿಗೆ ಸೂಚಿಸಲಾಗಿತ್ತು.
ರಾಮಚಂದ್ರ ಅವರು ರಾಯಚೂರಿನಲ್ಲಿ ಕರ್ತವ್ಯಗೆ ಹಾಜರಾಗದೆ ವರ್ಗಾವಣೆ ಆದೇಶದ ವಿರುದ್ಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ (ಕೆಎಟಿಗೆ) ದೂರು ಸಲ್ಲಿಸಿದ್ದರು. ಕೆಎಟಿ ಅವರ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಗುರುವಾರ ಬೆಳಿಗ್ಗೆ ಅವರು ಎಪಿಎಂಸಿ ಸಹಾಯಕ ಕಾರ್ಯದರ್ಶಿ ಕರ್ತವ್ಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಅಮಾನತು ಆದೇಶ ಬಂದಿದೆ.
ಅಪರಾಧ
Pagal lover-ಎರಡನೇ ಮದುವೆಯಾಗಲು ನಿರಾಕರಿಸದಳೆಂದು ಸಿಟ್ಟಿನಿಂದ ವಿವಾಹಿತೆಯ ಮನೆಗೆ ಬೆಂಕಿ ಕೊಟ್ಟ ಪಾಗಾಲ್ ಪ್ರೇಮಿ
ಬೆಂಗಳೂರು: ತನ್ನನ್ನು ಮದುವೆಯಾಗಲು ಒಪ್ಪಲಿಲ್ಲ, ಇನ್ನೂ ಎಂದಿಗೂ ಪ್ರಿಯತಮೆ ಸಿಗುವುದಿಲ್ಲ ಎಂದು ಮನನೊಂದ ಪಾಗಲ್ ಪ್ರೇಮಿ, ವಿವಾಹಿತ ಮಹಿಳೆಯೊಬ್ಬರ ಮನೆಗೆ ಬೆಂಕಿ ಹಚ್ಚಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹಾಕಿದ್ದ ಪ್ರಕರಣ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಏಪ್ರಿಲ್ 11 ರಂದು ಘಟನೆ ನಡೆದಿದ್ದು, ಯುವತಿ ಅರ್ಬಿನಾ ತಾಜ್ ನೀಡಿದ ದೂರಿನನ್ವಯ ಅರ್ಬಾಜ್ (24) ಎಂಬುವವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ‘ಆರೋಪಿ ಅರ್ಬಾಜ್, ದೂರುದಾರ ಮಹಿಳೆಯ ಸಂಬಂಧಿಕ. ಮಹಿಳೆಗೆ ಮದುವೆಯಾಗಿದ್ದು, ಅಷ್ಟಾದರೂ ಆರೋಪಿ ತನ್ನನ್ನು ಎರಡನೇ ಮದುವೆಯಾಗುವಂತೆ ಪೀಡಿಸುತ್ತಿದ್ದ. ಅರ್ಬಿನಾ ತಾಜ್ ಪತಿ ಸೈಯದ್ ಅಜಂ ಮತ್ತು ಅವರ ನಾಲ್ವರು ಮಕ್ಕಳೊಂದಿಗೆ ಸಾರಾಯಿಪಾಳ್ಯದ ಮಸೀದಿ ಫಾತಿಮಾ ಲೇಔಟ್ನಲ್ಲಿ ವಾಸಿಸುತ್ತಿದ್ದರು.
ಆರೋಪಿ ತಾಜ್ ಅರ್ಬಿನಾ ಹಿಂದೆ ಬಿದ್ದು, ಪತಿಯನ್ನು ತೊರೆದ ತನನ್ನು ವಿವಾಹವಾಗುವಂತೆ ಪೀಡಿಸಲು ಆರಂಭಿಸಿದ್ದಾರೆ. ಇದೆ ವಿಚಾರವಾಗಿ ಅರ್ಬಿನಾ ಪತಿ ಹಾಗೂ ಅರ್ಬಾಜ್ ನಡುವೆ ಜಗಳವೂ ಆಗಿದೆ. ನಂತರ, ಹಿರಿಯರ ಸಮ್ಮುಖದಲ್ಲಿ ಆರೋಪಿಗೆ ಬುದ್ಧಿವಾದ ಹೇಳಲಾಗಿತ್ತು. ವಿವಾಹಿತೆ ಮಹಿಳೆ ತಂಟೆಗೆ ಹೋಗದಂತೆ ತಾಕೀತು ಮಾಡಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.
ಏಪ್ರಿಲ್ 10 ರಂದು ಅರ್ಬಿನಾಗೆ ಬೇರೆ ನಂಬರ್ ನಿಂದ ಕರೆ ಮಾಡಿರುವ ಆರೋಪಿ ಜಗಳವಾಡಿದ್ದಾನೆ. ಅದೇ ರಾತ್ರಿ ಅರ್ಬಿನಾ ಪತಿಯೊದಿಗೆ ರಂಜಾನ್ ಶಾಂಪಿಂಗ್’ಗೆ ತರಳಿದ್ದಾರೆ. ಏಪ್ರಿಲ್ 11 ರಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮತ್ತೆ ಕರೆ ಮಾಡಿರುವ ಆರೋಪಿ, ಮನೆಗೆ ಬೆಂಕಿ ಹಚ್ಚಿರುವುದಾಗಿ ತಿಳಿಸಿದ್ದಾನೆ. ದಂಪತಿ ಮನೆ ಬಳಿ ಧಾವಿಸಿದಾಗ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು ಕಂಡು ಬಂದಿದೆ.
ಸ್ಥಳೀಯ
SIT investigation-SIT ತನಿಖೆಗೆ ಭಾರೀ ಅಡ್ಡಿ – ಪ್ರಜ್ವಲ್ ರೇವಣ್ಣ ವಿಡಿಯೋಗಳಲ್ಲಿರುವ ಸಂತ್ರಸ್ತೆಯರಿಂದ ಆತ್ಮಹತ್ಯೆ ಬೆದರಿಕೆ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋಗಳಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ಹರಸಾಹಸ ಪಡುತ್ತಿದ್ದು, ಭೇಟಿ ಮಾಡಲು ಯತ್ನಿಸಿದ ವೇಳೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ವಿಡಿಯೋದಲ್ಲಿರುವ ಬಹುತೇಕ ಮಹಿಳೆಯರು ‘ತಾವು ಎಲ್ಲಿಗೂ ಬರುವುದಿಲ್ಲ. ನೀವ್ಯಾರೂ ನಮ್ಮನ್ನು ಸಂಪರ್ಕಿಸಬೇಡಿ. ನಾವು ಯಾವ ಹೇಳಿಕೆಯನ್ನೂ ಕೊಡುವುದಿಲ್ಲ. ನಮ್ಮ ಮೇಲೆ ಒತ್ತಡ ಹಾಕಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’ ಎಂದು ಎಸ್ಐಟಿ ತಂಡದ ಸಿಬ್ಬಂದಿ ಅವರನ್ನು ಸಂಪರ್ಕಿಸಲು ಯತ್ನಿಸಿದಾಗ, ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಈ ಮಹಿಳೆಯರ ಪೈಕಿ ಕೆಲವರು ಈವರೆಗೂ ಮನೆ ಬಿಟ್ಟು ಹೊರಗೆ ಬಂದಿಲ್ಲ. ಇನ್ನು ಕೆಲವರು ಊರು ತೊರೆದು ಅಜ್ಞಾತ ಸ್ಥಳಗಳಲ್ಲಿ ತಲೆಮರೆಸಿಕೊಂಡಿದ್ದಾರೆ. ಮಹಿಳೆಯರ ಈ ಅಸಹಕಾರ ಎಸ್ಐಟಿ ತಂಡದ ತನಿಖೆಗೆ ತೀವ್ರ ಅಡ್ಡಿಯಾಗುತ್ತಿದೆ
-
ವೈರಲ್ ನ್ಯೂಸ್2 days ago
Kukke Subrahmanya | ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ನೂತನ ಆಡಳಿತಾಧಿಕಾರಿ ಯೇಸುರಾಜ್ ಧರ್ಮದ ಬಗ್ಗೆ ಅಪಪ್ರಚಾರ : ಕುಲ ಗೋತ್ರದ ದಾಖಲೆ ಸಮೇತ ಟ್ವೀಟ್ ಮಾಡಿ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಸಚಿವ ರೆಡ್ಡಿ – ಸಚಿವರು ದಾಖಲೆ ತೋರಿಸುತ್ತಿದ್ದಂತೆ ಒಂದೊಂದೇ ಪೋಸ್ಟ್ ಡಿಲೀಟ್..!
-
ವೈರಲ್ ನ್ಯೂಸ್2 days ago
Covishield Side Effect | ಪುನೀತ್ ರಾಜ್ ಕುಮಾರ್ ಕೊರೋನಾ ಲಸಿಕೆ ಹಾಕಿಸಿಕೊಂಡಾಗ ಕೋವಿಶೀಲ್ಡ್ ಬಗ್ಗೆ ಎಚ್ಚರಿಸಿದ್ದ ಅಭಿಮಾನಿ..! ಇದೀಗ ವೈರಲ್
-
ಕೊಡಗು2 days ago
Longest Glass Bridge | ಪ್ರವಾಸಿಗರ ಸ್ವರ್ಗ ಕೊಡಗಿನಲ್ಲಿ ತಲೆಯೆತ್ತಿದೆ ಮತ್ತೊಂದು ಗ್ಲಾಸ್ ಬ್ರಿಡ್ಜ್ – ದಕ್ಷಿಣ ಭಾರತದ ಅತಿ ದೊಡ್ಡ ಗಾಜು ಸೇತುವೆಯಲ್ಲಿ ನಡೆಯುವುದೇ ಮೈರೋಮಾಂಚನ..! ಬರ್ತ್ ಡೇ, ಪೋಟೋ ಶೂಟ್ ಗೆ ಇಲ್ಲಿದೆ ಸ್ಪೆಷಲ್ ಗ್ಲಾಸ್ ಗ್ಯಾಲರಿ
-
ಅಂತರ ರಾಜ್ಯ2 days ago
Covishield-ಕೋವಿಶೀಲ್ಡ್ ಲಸಿಕೆಯಿಂದ ಮಕ್ಕಳ ಸಾವು ..! ನ್ಯಾಯಾಲಯದ ಮೆಟ್ಟಿಲೇರಲು ಸಿದ್ದತೆ ನಡೆಸಿರುವ 2 ಭಾರತೀಯ ಕುಟುಂಬಗಳು
-
ಬಿಗ್ ನ್ಯೂಸ್2 days ago
ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಕಾರು ಡಿಕ್ಕಿ – ಟ್ರಾಫಿಕ್ ಜಾಮ್
-
ಅಂತರ ರಾಜ್ಯ2 days ago
Health Ministry-ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಿಂದ ಮೋದಿ ಅವರ ಫೋಟೋ ತೆಗೆದು ಹಾಕಿದ ಆರೋಗ್ಯ ಇಲಾಖೆ – ಅಸ್ಟ್ರಾಜೆನೆಕಾ ಸಂಸ್ಥೆಯ ವರದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
-
ಬಿಗ್ ನ್ಯೂಸ್2 days ago
Prajwal Revanna Scandal | ರಾಜತಾಂತ್ರಿಕ ಪಾಸ್ಪೋರ್ಟ್ ನಲ್ಲೇ ವಿದೇಶಕ್ಕೆ ತೆರಳಿದ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ..! ಒಪ್ಪಿಕೊಂಡ ಕೇಂದ್ರ ಸರ್ಕಾರ
-
ದಕ್ಷಿಣ ಕನ್ನಡ2 days ago
Temperature-ದ.ಕ.ಜಿಲ್ಲೆಯಲ್ಲಿ 40 ಡಿಗ್ರಿ ಸನಿಹಕ್ಕೆ ಬಿಸಿಲಿನ ತಾಪಮಾನ; ಹವಮಾನ ಇಲಾಖೆ ನೀಡಿತ್ತು ಕರಾವಳಿಯಲ್ಲಿ ಮಳೆಯ ಮುನ್ಸೂಚನೆ- ಯಾವಾಗ ಗೊತ್ತೆ ?