Connect with us

ರಾಜಕೀಯ

Prajwal Revanna-ವಾಟ್ಸ್‌ಆ್ಯಪ್ ಮೂಲಕ ಪ್ರಜ್ವಲ್ ರೇವಣ್ಣಗೆ 3ನೇ ನೋಟಿಸ್‌ ಜಾರಿ ಮಾಡಿದ ಎಸ್‌ಐಟಿ

Ad Widget

Ad Widget

Ad Widget

Ad Widget

ಬೆಂಗಳೂರು, ಮೇ5: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಎರಡು ನೋಟಿಸ್ ಜಾರಿಗೊಳಿಸಿದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜತೆಗೆ ಲುಕ್‌ಔಟ್ ಮತ್ತು ಬ್ಲೂಕಾರ್ನರ್ ನೋಟಿಸ್‌ ಹೊರಡಿಸಿದರೂ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಎಸ್‌ಐಟಿ ರವಿವಾರ ವಾಟ್ಸ್‌ಆ್ಯಪ್ ಮೂಲಕ ಆರೋಪಿಗೆ 3ನೇ ನೋಟಿಸ್‌ ಜಾರಿಗೊಳಿಸಿದೆ.

Ad Widget

Ad Widget

Ad Widget

Ad Widget

ಈ ಮಧ್ಯೆ ಸಂಸದ ಪ್ರಜ್ವಲ್ ರೇವಣ್ಣ ರವಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಮೇರೆಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿದ್ದು, ಆರೋಪಿಗಾಗಿ ಕಾದು ಹೈರಾಣಾಗಿದ್ದಾರೆ. ಕೆಲವು ದಿನಗಳ ಹಿಂದೆ ಜರ್ಮನಿಗೆ ತೆರಳಿದ್ದ ಪ್ರಜ್ವಲ್ ಬಳಿಕ ದುಬಾಯಿಯಲ್ಲಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ಮಧ್ಯೆ ರವಿವಾರ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಕುಟುಂಬ ಸದಸ್ಯರು ಹಾಗೂ ಜೆಡಿಎಸ್ ಮುಖಂಡರು ಮಾಹಿತಿ ನೀಡಿದ್ದರು.

Ad Widget

Ad Widget

Ad Widget

Ad Widget

ಈ ಮಾಹಿತಿಯಿಂದ ಎಚ್ಚೆತ್ತ ಎಸ್‌ಐಟಿ ಅಧಿಕಾರಿಗಳು ಶನಿವಾರ ರಾತ್ರಿಯೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಕಾದಿದ್ದರು. ಎಸ್‌ಐಟಿಯ 12 ಮಂದಿ ಅಧಿಕಾರಿಗಳು ಹಾಗೂ ಸ್ಥಳೀಯ ಹತ್ತಾರು ಪೊಲೀಸರು ಏರ್‌ಪೋರ್ಟ್ ನಲ್ಲಿಯೇ ಬೀಡುಬಿಟ್ಟಿದ್ದಾರೆ.

Ad Widget

Ad Widget

Ad Widget

Ad Widget
Click to comment

Leave a Reply

ಸ್ಥಳೀಯ

Dr Dhananjaya Sarji-ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ

Ad Widget

Ad Widget

Ad Widget

Ad Widget

ಶಿವಮೊಗ್ಗ : ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮನವಿ ಮಾಡಿದರು.

Ad Widget

Ad Widget

Ad Widget

Ad Widget

ನಗರದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವೈದ್ಯ ಶಿಕ್ಷಣ ಮುಗಿದ ತಕ್ಷಣ ನಾನು ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ನಂತರ ಚಿಕ್ಕದಾಗಿ ಒಂದು ಕ್ಲಿನಿಕ್ ಆರಂಭಿಸಿದ್ದು, ಇದೀಗ 1000 ಸಿಬ್ಬಂದಿ ಹಾಗೂ 100 ವೈದ್ಯರು ಆಸ್ಪತ್ರೆಯಲ್ಲಿ ಸೇವೆಸಲ್ಲಿಸುತ್ತಿದ್ದಾರೆ, ವಿವಿಧ ಹಂತಗಳಲ್ಲಿ ಪದವೀದರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತುಕೊಂಡಿದ್ದೇನೆ, ನೈರುತ್ಯ ಪದವೀಧರ ಕ್ಷೇತ್ರವು 14 ಮೆಡಿಕಲ್ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಕ್ಕಿಂತ ಹೆಚ್ಚು ದೊಡ್ಡ ದೊಡ್ಡ ವಿದ್ಯಾಸ್ಥೆಗಳನ್ನು ಹೊಂದಿದ ಸುಶಿಕ್ಷಿತರ ಕ್ಷೇತ್ರ. ಈ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಮಂಗಳೂರು, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂಡಿದೆ, ಕ್ಷೇತ್ರದಲ್ಲಿ 85 ಸಾವಿರ ಮತದಾರರಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ 27 ಸಾವಿರ ಮತದಾರರಿದ್ದಾರೆ, ನನ್ನ ಗೆಲುವಿಗಾಗಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ಹೇಳಿದರು.

Ad Widget

Ad Widget

Ad Widget

Ad Widget

10 ನೇ ವಯಸ್ಸಿನಿಂದ ಆರ್ ಎಸ್ ಎಸ್ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸಿದ್ದೇನೆ, ಐಟಿಸಿ, ಒಟಿಸಿ ಮುಗಿಸಿ ಮುಖ್ಯ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದು, ವೈದ್ಯ ವೃತ್ತಿಯೊಂದಿಗೆ ಸಂಘದ ಅನೇಕ ಜವಾಬ್ದಾರಿಗಳನ್ನು ನಿರ್ವಹಸಿದ್ದೇನೆ, ವಿಕಾಸ ಟ್ರಸ್ಟ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಮುನ್ನ ವಿಕಾಸ ಟ್ರಸ್ಟ್ ಗೆ ರಾಜೀನಾಮೆ ಸಲ್ಲಿಸಿ, ಕಳೆದ ಎರಡು ವರ್ಷಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಗೂಂಡು ಬಿಜೆಪಿಯಲ್ಲೀಗ ಜಿಲ್ಲಾ ಉಪ[ಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪಕ್ಷದ ಹಿರಿಯರು ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು, ಅವರೆಲ್ಲರಿಗೂ ಅನಂತ ಧನ್ಯವಾದಗಳು, ಈ ಚುನಾವಣೆಯಲ್ಲಿ ತಮ್ಮೆಲ್ಲರ ಸಹಕಾರ, ಬೆಂಬಲದೊಂದಿಗೆ ಗೆಲುವು ಸಾಧಿಸಿ ಪದವೀದರರ ಸಮಸ್ಯೆಗಳಿಗೆ ಪ್ರಾಮಣಿಕವಾಗಿ ಸ್ಪಂದಿಸುವೆ ಎಂದು ಭರವಸೆ ನೀಡಿದರು.

Ad Widget

Ad Widget

Ad Widget

Ad Widget

ಶಾಸಕ ಎಸ್.ಎನ್. ಚನ್ನ ಬಸಪ್ಪ,ಮಾತನಾಡಿ, ಪಕ್ಷದ ಹಿರಿಯರು ತೀರ್ಮಾನ ಕೈಗೊಂಡು ಡಾ.ಧನಂಜಯ ಸರ್ಜಿ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ,ಎಲ್ಲ ಕಾರ್ಯಕರ್ತರು ಸೇರಿ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

Ad Widget

Ad Widget

Ad Widget

ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರಾಜ್ಯ ಸಂಚಾಕರಾದ ಎಸ್.ದತ್ತಾತ್ರಿ, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಮಾಜಿ ಸೂಡಾ ಅಧ್ಯಕ್ಷರಾದ ನಾಗರಾಜ್ ಮತ್ತಿತರರು ಹಾಜರಿದ್ದರು.

Continue Reading

ಅಂತರ ರಾಜ್ಯ

Delhi-ದೆಹಲಿ ಮದ್ಯ ನೀತಿ ಪ್ರಕರಣ; ಆಮ್‌ ಆದ್ಮಿ ಪಕ್ಷ ಆರೋಪಿ; ರಾಜಕೀಯ ಪಕ್ಷವೊಂದನ್ನು ಆರೋಪಿಯನ್ನಾಗಿಸಿದ ದೇಶದ ಮೊದಲ ಕೇಸ್‌

Ad Widget

Ad Widget

Ad Widget

Ad Widget

ನವದೆಹಲಿ: ರಾಜಕೀಯ ಪಕ್ಷವೊಂದನ್ನು ಆರೋಪಿ ಎಂದು ಹೆಸರಿಸಿರುವುದು ದೇಶದಲ್ಲಿ ಇದೇ ಮೊದಲು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಆಮ್‌ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ.

Ad Widget

Ad Widget

Ad Widget

Ad Widget

ದೆಹಲಿಯ ವಿಶೇಷ ಕೋರ್ಟ್‌ಗೆ ಜಾರಿ ನಿರ್ದೇಶನಾಲಯವು ಪೂರಕ ದಾಖಲೆಗಳೊಂದಿಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಇದು ಈ ಪ್ರಕರಣದ 8ನೇ ಚಾರ್ಜ್‌ಶೀಟ್‌ ಆಗಿದೆ. ಒಟ್ಟು 18 ಮಂದಿಯನ್ನು ಬಂಧಿಸಲಾಗಿದೆ. ಎಎಪಿ ನಾಯಕರು, ಇತರ ವ್ಯಕ್ತಿಗಳೊಂದಿಗೆ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಇಡಿ ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

Ad Widget

Ad Widget

Ad Widget

Ad Widget

ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿದಂತೆ ಹಲವು ನಾಯಕರು ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದು, ಲಾಭದ ಸ್ವಲ್ಪ ಮೊತ್ತವನ್ನು ಎಎಪಿಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೂ ಬಳಸಲಾಗಿದೆ. ಅಲ್ಲದೇ ಈ ಪ್ರಕರಣದ ಮಾತುಕತೆ ನಡೆಸಲು ಕೇಜ್ರಿವಾಲ್ ಅವರು ಸೆವೆನ್ ಸ್ಟಾರ್ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು ಎಂಬುದಕ್ಕೆ ನಮ್ಮ ಬಳಿ ಪೂರಕ ದಾಖಲೆಗಳಿವೆ. ಅವರು ತಂಗಿದ್ದ ಹೋಟೆಲ್‌ ಬಿಲ್‌ ಅನ್ನು ಪ್ರಕರಣದ ಆರೋಪಿಯೊಬ್ಬರು ಭಾಗಶಃ ಪಾವತಿಸಿದ್ದಾರೆ ಎಂಬುದಕ್ಕೂ ಪುರಾವೆಗಳಿವೆ ಎಂಬ ಮಾಹಿತಿಯನ್ನ ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದೆ.

Ad Widget

Ad Widget

Ad Widget

Ad Widget

ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಮನವಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ. ನ್ಯಾ. ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ತೀರ್ಪನ್ನು ಕಾಯ್ದಿರಿಸಿದ್ದರೂ, ಕಕ್ಷಿದಾರರ ವಾದಗಳಿಗೆ ಯಾವುದೇ ಧಕ್ಕೆಯಾಗದಂತೆ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಕೇಜ್ರಿವಾಲ್ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದೆ.

Ad Widget

Ad Widget

Ad Widget

ಕಳೆದ ಮಾರ್ಚ್ 21ರಂದು ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಸದ್ಯ ಜೂ.1 ರ ವರೆಗೆ ಅವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಮೇ 25 ರಂದು ದೆಹಲಿಯ 7 ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್‌ ಪರ ಕೇಜ್ರಿವಾಲ್‌ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

Continue Reading

ರಾಜಕೀಯ

ಎಕ್ಸ್‌ ಖಾತೆಯಲ್ಲಿ ಅಟಲ್‌ ಸೇತುವೆ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಪೋಸ್ಟ್‌: ವಿಡಿಯೋ ರೀಶೇರ್‌ ಮಾಡಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ

Ad Widget

Ad Widget

Ad Widget

Ad Widget

ಮುಂಬೈ: ಮುಂಬೈನ ಅಟಲ್‌ ಸೇತುವೆ ಬಗ್ಗೆ ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರು ಮೆಚ್ಚುಗೆಯ ಮಾತುಗಳನ್ನಾಡಿದ ವಿಡಿಯೊ ಹಂಚಿಕೊಂಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ರಶ್ಮಿಕಾ ಅವರ ವಿಡಿಯೊವನ್ನು ರೀಶೇರ್‌ ಮಾಡಿದ್ದಾರೆ.

Ad Widget

Ad Widget

Ad Widget

Ad Widget

‘ಜನರನ್ನು ಸಂಪರ್ಕಿಸುವುದು ಮತ್ತು ಅವರ ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ’ ಎಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಮೋದಿ ಪ್ರತಿಕ್ರಿಯಿಸಿದ್ದಾರೆ.

Ad Widget

Ad Widget

Ad Widget

Ad Widget

ಪ್ರಧಾನಿ ಮೋದಿಯವರು ಉದ್ಘಾಟಿಸಿದ ಅಟಲ್ ಬಿಹಾರಿ ವಾಜಪೇಯಿ ಶೆವಾರಿ-ನವ ಶೇವಾ ಅಟಲ್ ಸೇತುವೆ ಮೂಲಕ ಪ್ರಯಾಣಿಸಿದ ಅನುಭವದ ಬಗ್ಗೆ ಮಾತನಾಡಿರುವ ವೀಡಿಯೊವನ್ನು ರಶ್ಮಿಕಾ ಮಂದಣ್ಣ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

Ad Widget

Ad Widget

Ad Widget

Ad Widget

‘ಎರಡು ಗಂಟೆಗಳ ಪ್ರಯಾಣ ಈಗ 20 ನಿಮಿಷಗಳಲ್ಲಿ ಮುಗಿಯುತ್ತದೆ. ಇಂಥದ್ದೊಂದು ಸಾಧ್ಯವಿತ್ತು ಎಂದು ಯಾರು ಭಾವಿಸಿರಲಿಲ್ಲ. ಇಂದು ನವಿ ಮುಂಬೈನಿಂದ ಮುಂಬೈವರೆಗೆ, ಗೋವಾದಿಂದ ಮುಂಬೈವರೆಗೆ, ಬೆಂಗಳೂರಿನಿಂದ ಮುಂಬೈವರೆಗೆ ತುಂಬಾ ಸುಲಭವಾಗಿ ಮತ್ತು ಅದ್ಭುತ ಮೂಲಸೌಕರ್ಯಗಳೊಂದಿಗೆ ಪ್ರಯಾಣಿಸಬಹುದು. ಇದು ನನಗೆ ಹೆಮ್ಮೆ ತರುತ್ತದೆ’ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

Ad Widget

Ad Widget

Ad Widget

‘ಯುವ ಪೀಳಿಗೆ, ಯುವ ಭಾರತ, ವೇಗದಲ್ಲಿ ಬೆಳೆಯುತ್ತಿದೆ. ಭಾರತವು ಅತ್ಯಂತ ಬುದ್ಧಿವಂತ ದೇಶ. ಯುವ ಭಾರತೀಯರು ಮತ ಚಲಾಯಿಸಬೇಕು’ ಎಂದಿದ್ದಾರೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading